Sunday, May 5, 2024

ಜ.16 ಕ್ಕೆ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮೋತ್ಸವ!

ದೊಡ್ಡಬಳ್ಳಾಪುರ : ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ.16 ರ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನದ ಮುಹೂರ್ತದಲ್ಲಿ ನಡೆಯಲಿದೆ.

ಇದನ್ನೂ ಓದಿ: ಕರಸೇವಕರ ಬಂಧನ ವಿಚಾರ, ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಷಷ್ಠಿಯ ದಿನದಂದು ದೇವಸ್ಥಾನದಲ್ಲಿ ಮುಂಜಾನೆ 3ರಿಂದ ಪೂಜಾ ಕಾರ್ಯಗಳು ಆರಂಭವಾಗೊಳ್ಳಲಿವೆ. ಅಭಿಷೇಕ ಕಾರ್ಯಗಳು ನೆರವೇರಲಿದೆ. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದ ಟಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಗುತ್ತದೆ.

ಇನ್ನೂ ಈ ದಿನದಂದು ನಾಡಿನ ಭಕ್ತರಿಗೆ ರಾತ್ರಿ 8:30ರವರೆಗೂ ದೇವರ ದರ್ಶನ ವ್ಯವಸ್ಥೆ ದೊರೆಯಲಿದೆ.

RELATED ARTICLES

Related Articles

TRENDING ARTICLES