Tuesday, May 21, 2024

ಇಂದಿನಿಂದ ಫವತಿ ಖಾತೆ ವಿಶೇಷ ಆಂದೋಲನ: ರೈತರು ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಸಿಎಂ,ಡಿಸಿಎಂ ಇಲ್ಲದ ವೇಳೆ ಸಚಿವರ ರಹಸ್ಯ ಸಭೆ!

ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ/ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಛೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES

Related Articles

TRENDING ARTICLES