Saturday, May 18, 2024

ಮಗನ ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ರವಾನೆ: ಸಿಇಓ ಸುಚನಾ ಅರೆಸ್ಟ್!

ಚಿತ್ರದುರ್ಗ: ಮಗುವಿನ ಹತ್ಯೆ ಮಾಡಿ ಸೂಟ್​ ಕೇಸ್​ ನಲ್ಲಿ ರವಾನೆ ಮಾಡುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೋವಾದಿಂದ ಟ್ಯಾಕ್ಸಿ ಮೂಲಕ ಬೆಂಗಳೂರು ಕಡೆಗೆ ಸಾಗುವ ಮಾರ್ಗ ಮಧ್ಯ ಚಿತ್ರದುರ್ಗದ ಐಮಂಗಲ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಚನಾ ಸೇಠ್, ಸೂಟ್ ಕೇಸ್​ನಲ್ಲಿ ಮಗುವಿನ ಶವ ರವಾನೆ ಮಾಡುತ್ತಿದ್ದ ಮಹಿಳೆ. ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ.

ಇದನ್ನೂ ಓದಿ: ಯಶ್​ ನೋಡಲು ಬಂದ ಇಂಜಿನಿಯರಿಂಗ್ ಟಾಪರ್ ಗೆ ಅಪಘಾತ: ಚಿಕಿತ್ಸೆ ಫಲಿಸದೇ ಸಾವು!

ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಹೋಟೆಲ್ ಸಿಬ್ಬಂದಿ ಗೋವಾ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ. ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದು ಐಮಂಗಲ ಪೊಲೀಸರಿಗೆ ಆರೋಪಿ ಸುಚನಾಳನ್ನು ಒಪ್ಪಿಸಿದ್ದಾರೆ.

RELATED ARTICLES

Related Articles

TRENDING ARTICLES