Tuesday, May 21, 2024

ಸಿದ್ದರಾಮಯ್ಯನವರೇ ನಿಮಗೆ ನಾಚಿಗೆ ಆಗಲ್ವಾ? : ಅಶೋಕ್ ಯದ್ವಾತದ್ವ ವಾಗ್ದಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಾಚಿಗೆ ಆಗಲ್ವಾ? ನಮ್ಮ ಸರ್ಕಾರದಂತೆ ನೀವು ಹಣ ಕೊಡಿ, ಇಲ್ಲವಾದಲ್ಲಿ ನೀವು ರಾಜೀನಾಮೆ ಕೊಡಿ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಬಂದರೂ ರೈತರಿಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಯಾವುದೇ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ಖಜಾನೆ ಖಾಲಿ ಆಗಿದೆಯೇ?

ರಾಜ್ಯದ ಬೇಜವಾಬ್ದಾರಿ ಸರ್ಕಾರದ ವಿರುದ್ಧ ಗವರ್ನರ್​ ಥಾವರ್​ ಚಂದ್​​ ಗೆಹ್ಲೋಟ್​​​ ಅವರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ 200 ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕಡೆ ಸರ್ಕಾರ ತಿರುಗಿಯೂ ನೋಡುತ್ತಿಲ್ಲ. ಸರ್ಕಾರದ ಖಜಾನೆ ಖಾಲಿ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರೈತರ ಪಾಲಿಗೆ ಸರ್ಕಾರ ಸತ್ತಂತೆ : ಬೊಮ್ಮಾಯಿ 

ರೈತರ ಸಾವಿಗೆ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ರೈತರ ಸಾವಿಗೆ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ರೈತರಿಗೆ ನೆರವು ನೀಡಲು ಮುಂದಾಗದ ಸರ್ಕಾರ ಕೇವಲ ಕೇಂದ್ರ ಸರ್ಕಾರವನ್ನು ದೂರುತ್ತಿದೆ. ಇವರು ಕೊಡುತ್ತಿರುವುದು ನೂರು ಕೋಟಿ ಮಾತ್ರ. ರೈತರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದಾರೆ ಎಂದು ಆರ್​​. ಅಶೋಕ್​ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES