Tuesday, May 14, 2024

ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ

ಕೊಪ್ಪಳ: ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ, ಮಾಲಾಧಾರಿಗಳಿಗೆ ಪ್ರಸಾದ ಹಂಚಿ ಭಾವೈಕ್ಯತೆ ಸಾರಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಯನಗರ ನಿವಾಸಿ, ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂ ಅಲಿ ಮುದ್ದಾಬಳ್ಳಿ ಅವರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿದ್ದಾರೆ. ಅಯ್ಯಪ್ಪ ಮಾಲಾಧಾರಿಗಳಿಂದ ಭಜನೆ ಮಾಡಿಸಿ, ಪ್ರಸಾದ ಹಂಚಿದ್ದಾರೆ.

ಕಾಶಿಂ ಅಲಿ ಅವರ ಕುಟುಂಬಸ್ಥರೂ ಕೂಡ ಅಯ್ಯಪ್ಪ ಮಾಲಾಧಾರಿಗಳ ಜೊತೆಗೂಡಿ ಭಜನೆ ಮಾಡಿದ್ದಾರೆ. ಮಾಲಾಧಾರಿಗಳಿಗೆ ಸತ್ಕರಿಸಿದ್ದಾರೆ.

ಕಾಶಿಂಅಲಿ ಮುದ್ದಾಬಳ್ಳಿ ಅವರು ಎಲ್ಲ ಅಯ್ಯಪ್ಪಸ್ವಾಮಿ ಮಾಲಾಧಾರಿಗಳನ್ನ ಸನ್ಮಾನಿಸಿ, ಬೀಳ್ಕೊಟ್ಟರು. ಈ ವೇಳೆ ಮಲಾಧಾರಿಗಳು, ಭಕ್ತರು, ಮುಸ್ಲಿಂ ಬಾಂಧವರು ಇದ್ದರು.

 

 

RELATED ARTICLES

Related Articles

TRENDING ARTICLES