Friday, May 17, 2024

ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ

ಅಯೋಧ್ಯೆ: ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅದರೆ ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತಿ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ.

ಹೌದು, ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಉದ್ದದ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ. ಅನೇಕ ವರ್ಷಗಳಿಂದ ಈ ಕನ್ನಡಿಗ ಭಕ್ತರು ಧ್ವಜ ನೀಡುವ ಸಂಕಲ್ಪ ಹೊಂದಿದ್ದಾಗಿ ತಿಳಿಸಿದ್ದಾರೆ.

ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹವನ್ನು ಮೈಸೂರಿ ಹೆಮ್ಮೆಯ ಕನ್ನಡಿಗ ಅರುಣ್​ ಯೋಗರಾಜ್​ರವರು ವಿಗ್ರಹವನ್ನು ಕೆತ್ತನೆ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES