Wednesday, July 3, 2024

ಸಿಎಂಗೆ ಮುಜುಗರ.. ಚೆಸ್ಕಾಂ ಎಂಡಿ ಶ್ರೀಧರ್ ಅಮಾನತು

ಮೈಸೂರು : ಸಿಎಂ ಸಿದ್ದರಾಮಯ್ಯ ಮುಜುಗರಕ್ಕೆ ಕಾರಣವಾದ ಚೆಸ್ಕಾಂ ಎಂಡಿ ಸಿ.ಎನ್​.ಶ್ರೀಧರ್​ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿರಲಿಲ್ಲ.

ಸಿಎಂ ಬಟನ್​ ಒತ್ತಿದ ವೇಳೆ ಅದು ಆನ್​ ಆಗಿರಲಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಮುಜುಗರಕ್ಕೆ ಒಳಗುಳ್ಳುವಂತೆ ಮಾಡಿತ್ತು. ಸಿಎಂ ಕಾರ್ಯಕ್ರಮವಾಗಿದ್ದರೂ ವಿದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಈ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಸಸ್ಪೆಂಡ್ ಮಾಡಿ ಆದೇಶಿಸಲಾಗಿದೆ.

RELATED ARTICLES

Related Articles

TRENDING ARTICLES