Sunday, May 5, 2024

ಹಿಂದು ಧರ್ಮದಿಂದ ಅನ್ಯ ಧರ್ಮದ ಮತಾಂತರಕ್ಕೆ ಯತ್ನ, 6 ಮಂದಿ ಅರೆಸ್ಟ್​​​!

ಉತ್ತರ ಕನ್ನಡ: ಮತಾಂತರ ಮಾಡಲು ಬಂದಿದ್ದ 6 ಆರೋಪಿಗಳನ್ನು ಬಂಧಿಸಿರುವ ಘಟನೆ ಶಿರಸಿ ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಮತಾಂತರ ಮಾಡಲು ಬಂದಿದ್ದ ಆರೋಪಿಗಳು. ಜಗಳಮನೆ ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ತಂಡ ಬಂದಿತ್ತು. ತಾಲೂಕಿನ ಜಗಳಮನೆ ಗ್ರಾಮದಲ್ಲಿ ಆರೋಪಿಗಳು ಗ್ರಾಮದ ಜನರನ್ನು ಮತಾಂತರ ಮಾಡಲು ಬಂದಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಆದರ್ಶ ಎಂಬುವರ ಮನೆಗೆ ಹೋಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹಾಗೂ ಮನೆಯವರಿಗೆ ಆರೋಗ್ಯ ಸರಿ ಹೋಗಬೇಕು ಎಂದರೆ ಕ್ರೈಸ್ತ ಧರ್ಮವನ್ನು ಸ್ವೀಕಾರ ಮಾಡಿ ಎಂದು ಮನವೊಲಿಸಿದ್ದಾರೆ. ನಾವು ಕೂಡ ಮತಾಂತರ ಆಗಿದ್ದೇವೆ ಎಂದು ಹೇಳುತ್ತಾ ಆರು ಜನರು ಮನವೊಲಿಸಿದ್ದಾರೆ.

ಇದನ್ನು ಗಮನಿಸಿದ ಆದರ್ಶ ನಾಯ್ಕ ಘಟನೆ ಕುರಿತು ಶಿರಸಿ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮದ ಜನರ ಮನವೊಲಿಸಲು ಪ್ರಯತ್ನಿಸುತ್ತಿದ್ದ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES