Friday, May 3, 2024

ಕಾಂಗ್ರೆಸ್ಸಿನ ತುಕ್ಡೇ ಗ್ಯಾಂಗ್ ಗುಲಾಮರು ಬಾಲ ಬಿಚ್ಚುತ್ತಿದ್ದಾರೆ : ಬಿಜೆಪಿ

ಬೆಂಗಳೂರು : ಕಾಂಗ್ರೆಸ್ಸಿನ ತುಕ್ಡೇ ತುಕ್ಡೇ ಗ್ಯಾಂಗ್‌ ಗುಲಾಮರು ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ಬಾಲ ಬಿಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಸೋತು ಸುಣ್ಣವಾಗಿರುವ ಕಾಂಗ್ರೆಸ್ ಈಗ ದೇಶ ವಿಭಜಿಸುವ ಕುತಂತ್ರಕ್ಕೆ ಇಳಿಯುತ್ತಿದೆ ಎಂದು ಕುಟುಕಿದೆ.

ದೇಶ ಒಡೆಯಲು ಕಾಂಗ್ರೆಸ್​ ಇದುವರೆಗೂ ಮಾಡಿರುವ ಕುತಂತ್ರಗಳನ್ನು ಬಿಜೆಪಿ ಪಟ್ಟಿ ಮಾಡಿದೆ. ಜಿನ್ನಾ-ನೆಹರು ಕುತಂತ್ರದ ಫಲ ಪಾಕಿಸ್ಥಾನ ಸೃಷ್ಟಿ. ದೇಶ ಒಡೆಯಲು ನೆಹರು ಅವರಿಂದ 370ನೇ ವಿಧಿ ಗಿಫ್ಟ್. ಖಲಿಸ್ಥಾನಿ ಉಗ್ರ ಭಿಂದ್ರನ್‌ ವಾಲೆಗೆ ಇಂದಿರೆಯ ಬಲ. ಯಾತ್ರೆ ಮಾಡುತ್ತಾ ದೇಶ ವಿರೋಧಿಗಳನ್ನು ಒಂದುಗೂಡಿಸಿದ ರಾಹುಲ್. ಸಂಸದ ಡಿ.ಕೆ. ಸುರೇಶ್‌ ಅವರಿಂದ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಎಂದು ಛೇಡಿಸಿದೆ.

ಡಿಕೆಸು ಜವಾಬ್ದಾರಿ ಅರಿತು ಮಾತನಾಡಬೇಕು

ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ತನ್ನ ಜವಾಬ್ದಾರಿ ಅರಿತು ಮಾತನಾಡಬೇಕಿತ್ತು. ಸಂಸತ್ತಿನಲ್ಲಿ ಭಾರತದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಕಾಪಾಡುತ್ತೇನೆ ಎಂದು ಪ್ರತಿಜ್ಞೆ ಕೈಗೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಮರೆತಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES