ಬೆಂಗಳೂರು: BMTC ಕಿಲ್ಲರ್ ಬಿಎಂಟಿಸಿ ಎಂಬುವುದನ್ನು ಮತ್ತೆ BMTC ಸಾಬೀತು ಮಾಡಿಕೊಳ್ಳುತ್ತಲೇ ಇದೆ.
ಹೌದು, ರಾಜಾಜಿನಗರದ ಹರಿಶ್ಚಂದ್ರ ಘಾಟ್ ಬಳಿ ಬಿಎಂಟಿಸಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಕುಸುಮಿತಾ (21) ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿನಿಯಾಗಿದ್ದಾಳೆ. ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ ಕಾಲೇಜಿಗೆ ಹೋಗುವ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾಳೆ.
ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.