Thursday, May 9, 2024

ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ : ಸಚಿವ ಚಲುವರಾಯಸ್ವಾಮಿ ಟಾಂಗ್!

ಮಂಡ್ಯ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಹೆಚ್.ಡಿ ಕುಮಾರಸ್ವಾಮಿಯಿಂದ ನಾನು ಲೀಡರ್ ಆಗಿಲ್ಲ. ಅವರಿಂದ ವಿನಯತೆ ಹೇಳಿಸಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌ ಸಿಎಂ ಆಗಿ ಚಂಪಯಿ ಸೋರೆನ್ ಪ್ರಮಾಣವಚನ ಸ್ವೀಕಾರ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಕುಮಾರಸ್ವಾಮಿ ಅವರ ಮನೆ ಋಣದಲ್ಲಿ ಇದ್ದೇನಾ? ನಾನೇನೂ ಅವರ ಆಸ್ತಿ ತಿಂದಿದ್ದೇನಾ? ಗೌರವ ಬೇಡ ಎನ್ನಲಿ. ಅವರು ಮಾತಾಡಿದ್ದಕಿಂತ ಬೇರೆ ರೀತಿಯೇ ನಾನು ಅವರಿಗೆ ಮಾತನಾಡುತ್ತೇನೆ. ಕುಮಾರಸ್ವಾಮಿ ಕೈಯಲ್ಲಿ ನನ್ನ ಹಣೆಬರಹ ಬರೆಯಲಾಗುತ್ತಾ? ಕುಮಾರಸ್ವಾಮಿ ಅವರ ವಿಚಾರವೇ ಪ್ರಸ್ತುತ ಅಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ದೇವೇಗೌಡರ ಮೇಲಿನ ಗೌರವಕ್ಕಾಗಿ ಮಾತ್ರ ಸುಮ್ಮನಿದ್ದೀನಿ. ದೇವೇಗೌಡರ ಹೆಸರು ಅವರ ಜೊತೆ ಇಲ್ಲದಿದ್ದರೆ ಅದರ ಅಪ್ಪನಂಗೆ ನಾನು ಕುಮಾರಸ್ವಾಮಿ ಗೆ ಉತ್ತರ ಕೊಡುತ್ತಿದ್ದೆಎಂದು ಚಲುವರಾಯಸ್ವಾಮಿ ಅವರು ತಿರುಗೇಟು ನೀಡಿದರು.

RELATED ARTICLES

Related Articles

TRENDING ARTICLES