Sunday, May 12, 2024

ಸಪ್ತ ಸಾಗರದಾಚೆ ಎಲ್ಲೋ ನಿರ್ದೇಶಕನ ಕಥೆಗೆ ಶಿವಣ್ಣ ಗ್ರೀನ್‌ ಸಿಗ್ನಲ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ರಿಯೇಟಿವ್​ ಡೈರೆಕ್ಟರ್ ಹೇಮಂತ್ ರಾವ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೂಲಕ​​ ದೇಶದೆಲ್ಲೆಡೆ ಸದ್ದು ಮಾಡಿದ್ದು,ಸದ್ಯ ಪ್ರೀತಿ, ಪ್ರೇಮ ಎಲ್ಲ ಬೇಡ ಎಂದು ​ಮಾಸ್ ಮೂವಿ ಕಡೆ ಮುಖ ಮಾಡಿದ್ದಾರೆ.

ಹೌದು, ಮನು ಸುರಭಿ ಹಾಗೂ ಪ್ರಿಯಾಳ ಪ್ರೇಮಕಥೆ ಹೇಳಿ ಗೆದಿದ್ದ ಸಪ್ತ ಸಾಗರದಾಚೆ ಎಲ್ಲೋ ಸಾರಥಿ ಹೇಮಂತ್ ಈಗ ಹ್ಯಾಟ್ರಿಕ್ ಹೀರೋ ಜೊತೆ ಕೈ ಜೋಡಿಸಿದ್ದಾರೆ.

ಇತ್ತೀಚೆಗೆ ಚಂದನವನದ ಅಂಗಳದಲ್ಲಿ ಡೈರೆಕ್ಟರ್‌ ಹೇಮಂತ್ ರಾವ್ ಸೆಂಚುರಿ ಸಾರ್‌ ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಅದರಂತೆ ಹೇಮಂತ್ ರಾವ್ ಈಗಾಗಲೇ ಹ್ಯಾಟ್ರಿಕ್‌ ಹೀರೂ ಶಿವರಾಜ್‌ಕುಮಾರ್‌ಗೆ ಕಥೆ ಹೇಳಿದ್ದಾರಂತೆ. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಸೆಂಚುರಿ ಸ್ಟಾರ್ ಕಥೆ ಕೇಳಿ ಗ್ರೀನ್​ ಸಿಗ್ನಲ್ ಕೂಡ ಕೊಟ್ಟಿದ್ದಾರೆ ಎಂಬ ಗುಸುಗುಸು ಶುರುವಾಗಿದೆ. ಆದರೆ ಈ ಬಗ್ಗೆ ಇದೀಗ ಚಿತ್ರತಂಡವೇ ಅಧಿಕೃತ ಮುದ್ರೆ ಒತ್ತಿದೆ.

ದೊಡ್ಮನೆ ದೊರೆಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಕ್ ಗೌಡ ಈ ಸಿನಿಮಾಗೆ ಹಣ ಹಾಕುತ್ತಿದ್ದಾರೆ. ತಮ್ಮದೇ ವೈಶಾಕ್ ಜೆ ಫಿಲಂಸ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಈ ಪ್ರಾಜೆಕ್ಟ್‌ ಬಗ್ಗೆ ಶಿವಣ್ಣ ಜೊತೆ ಚರ್ಚೆ ನಡೆಸಲಾಗುತ್ತಿದ್ದು, ಇದೀಗ ಹ್ಯಾಟ್ರಿಕ್ ಹೀರೋ ಹೇಮಂತ್ ರಾವ್ ನಿರ್ದೇಶನದಲ್ಲಿ ನಟಿಸಲು ಒಪ್ಪಿಗೆ ನೀಡಿದ್ದಾರೆ.

ಹೇಮಂತ್ ರಾವ್ ನಿರ್ದೇಶನದ ಸಿನಿಮಾಗಳ ಪೈಕಿ ಈ ಪ್ರಾಜೆಕ್ಟ್ ಬಹಳ ವಿಭಿನ್ನವಾಗಿದ್ದು, ಹಿಂದೆಂದೂ ನೋಡದ ಶಿವಣ್ಣ ಅವರನ್ನು ಈ ಚಿತ್ರದ ಮೂಲಕ ತೋರಿಸಲು ಅವರು ಸಜ್ಜಾಗಿದ್ದಾರೆ. ಶಿವಣ್ಣನ ಅಪ್ಪಟ ಅಭಿಮಾನಿಯಾಗಿರುವ ನಿರ್ಮಾಪಕ ವೈಶಾಕ್ ತಮ್ಮ ಸಿನಿಮಾ ಜರ್ನಿಯನ್ನು ಶಿವಣ್ಣ ಅವರ ಜೊತೆ ಆರಂಭ ಮಾಡುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರದಲ್ಲೇ ಸ್ಟಾರ್ ಕಾಸ್ಟ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’ ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಹೊಸ ಅಲೆ ಸೃಷ್ಟಿಸಿರುವ ಹೊಸ ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

RELATED ARTICLES

Related Articles

TRENDING ARTICLES