Tuesday, September 17, 2024

ನಾಳೆಯಿಂದ ರಾಮಾಯಣ ಧಾರಾವಾಹಿ ಮತ್ತೆ ಪ್ರಸಾರ!

ನವದೆಹಲಿ: ದೇಶದ ಪ್ರಸಿದ್ದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು (ದೂರದರ್ಶನ) ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ ಈ ದಾರಾವಾಹಿಯೂ ಮೂರು ದಶಕಗಳ ಹಿಂದೆ ರಮನಾಂದ ಸಾಗರ್ ಅವರ ನಿರ್ದೇಶನದಲ್ಲಿ ಮೂಡಿಬಂದಿತ್ತು.

ಈ ಕುರಿತು ದೂರದರ್ಶನ ಡಿಡಿ ನ್ಯಾಷನಲ್ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು ಇದರಲ್ಲಿ, ರಾಮಾಯಣ ದಾರಾವಾಹಿಯು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ: ಕ್ಯಾನ್ಸ್​ರ್​ನಿಂದ ನಮೀಬಿಯಾದ ಅಧ್ಯಕ್ಷ ನಿಧನ!

ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ. ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್ ತಿಳಿಸಿದೆ. 80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಕ್ಷ್ಮಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನೂ ಈ ಧಾರಾವಾಹಿ ಗಳಿಸಿತ್ತು.

ಕೊರೊನಾ ಲಾಕ್‌ಡೌನ್ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದುಕೊಂಡಿತ್ತು.

RELATED ARTICLES

Related Articles

TRENDING ARTICLES