Thursday, May 2, 2024

ಆಯತಪ್ಪಿ ಬಸ್ಸಿನಿಂದ ಹೊರಗೆ ಬಿದ್ದು ವೃದ್ಧೆ ಸಾವು: ವೀಡಿಯೋ ವೈರಲ್​

ದಕ್ಷಿಣಕನ್ನಡ: ಬಸ್ಸಿನಿಂದ ಆಯತಪ್ಪಿ ವೃದ್ಧೆ ಬಿದ್ದ ಸಾವನ್ನಪ್ಪಿರುವ ಘಟನೆ ದ.ಕ ಜಿಲ್ಲೆಯ ಉಪ್ಪಿನಂಗಡಿ ಬಳಿ ಮಾಣಿ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಚಲಿಸುತ್ತಿದ್ದ ಖಾಸಗಿ ಬಸ್ಸಿನಿಂದ ವೃದ್ಧೆ ಕೆಳಗೆ ಬಿದ್ದಿದ್ದಾರೆ. ಜ.31ರಂದು ಈ ಘಟನೆ ನಡೆದಿದ್ದು, ಬಸ್ಸಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ ಮೃತ ದುರ್ದೈವಿ. ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 40% ಭ್ರಷ್ಟಾಚಾರ : ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು-ಎಎಪಿ

ಮಗು ಹಿಡಿದು ಬಂದ ಮಹಿಳೆಗೆ ವೃದ್ಧೆ ಸೀಟು ಬಿಟ್ಟುಕೊಟ್ಟಿದ್ದಾರೆ. ಮುಸ್ಲಿಂ ಮಹಿಳೆಗೆ ಸೀಟು ಕೊಡಲು ಎದ್ದು ನಿಂತಿದ್ದಾಗಲೇ ಆಯತಪ್ಪಿ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ಮೃತಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES