Wednesday, May 1, 2024

ಅಳಿಯನಿಂದ ಅತ್ತೆಯ ಬರ್ಬರ ಕೊಲೆ!

ತುಮಕೂರು: ಅಳಿಯ-ಮಗಳ ಜಗಳದಲ್ಲಿ ಅತ್ತೆ ಕೊಲೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ನಡೆದಿದೆ.

ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆ. ಹತ್ಯೆಯಾದ ಮಹಿಳೆಯ ಮಗಳು ಹಾಗೂ ಅಳಿಯನ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಯತ್ನಿಸಿದ ಮಹಿಳೆಯ ತಲೆಗೆ ಅಳಿಯ ದೊಣ್ಣೆಯಿಂದ ಹೊಡೆದ ಪರಿಣಾಮ ಆಕೆ ಸಾವಿಗೀಡಾಗಿದ್ದಾಳೆ.

ಇದನ್ನೂ ಓದಿ: ಸಂಚಾರಿ ನಿಯಮ ಉಲ್ಲಂಘನೆ :30 ಸಾವಿರದ ಸ್ಕೂಟರ್​ಗೆ ₹3 ಲಕ್ಷ ಟ್ರಾಫಿಕ್​​​ ದಂಡ!

ಹತ್ಯೆಯಾದ ಅಶ್ವಿತ್ ಉನ್ನಿಸಾಳ ಮಗಳನ್ನು ಕೊಡಿಗೇನಹಳ್ಳಿಯ ಸೈಯದ್ ಸುಹೇಲ್‍ನೊಂದಿಗೆ ಮದುವೆ ಮಾಡಲಾಗಿತ್ತು. ಮದುವೆಯ ಬಳಿಕ ಅವರಿಬ್ಬರ ನಡುವೆ ನಿರಂತರ ಜಗಳ ನಡೆಯುತ್ತಿತ್ತು. ಎಂದಿನಂತೆ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ತವರು ಮನೆಯಲ್ಲಿದ್ದ ತಾಯಿಯನ್ನು ಫೋನ್ ಮಾಡಿ ಮಗಳು ಕರೆಸಿಕೊಂಡಿದ್ದಳು. ಈ ವೇಳೆ ಜಗಳ ಬಿಡಿಸಲು ಮುಂದಾದ ಮಹಿಳೆಯ ತಲೆಗೆ ಅಳಿಯ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಶ್ವಿತ್ ಉನ್ನಿಸಾಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.

ಈ ಪ್ರಕರಣವು ಮದುಗಿರಿ ಪೋಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೆಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES

Related Articles

TRENDING ARTICLES