Sunday, May 5, 2024

ಅಮಿತ್ ಶಾ ರಾಜ್ಯಕ್ಕೆ ಬರಿಗೈಯಲ್ಲಿ ಬಂದಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಮಿತ್ ಶಾ ರಾಜ್ಯಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಇವತ್ತಿನವರೆಗೂ ಬರ ಬಗ್ಗೆ ಒಂದು ಸಭೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಬರ ಪರಿಹಾರ ಕೊಡಲು ಅಧ್ಯಕ್ಷರೇ ಮಿಸ್ಟರ್ ಅಮಿತ್ ಶಾ. ಇವತ್ತಿನವರೆಗೆ ಒಂದು ಸಭೆ ಮಾಡಿಲ್ಲ, ಐದು ತಿಂಗಳಾದವು. ರೈತರ ಬಗ್ಗೆ, ದೇಶದ ಬಗ್ಗೆ, ಬಡವರ ಬಗ್ಗೆ ಅವರಿಗೆ ಮಾತಾಡುವ ನೈತಿಕತೆ ಇಲ್ಲ. ರೈತರು ಕಷ್ಟ ಪಡ್ತಿದ್ದಾರೆ, ನೀರಿಗೆ ಸಮಸ್ಯೆ ಇದೆ, ಕೆಲಸಕ್ಕೆ ಕಷ್ಟ ಇದೆ ಎಂದು ಅಕ್ರೋಶ ಹೊರಹಾಕಿದ್ದಾರೆ.

ಶಾಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು

ನರೇಗಾದಡಿ ಬರಗಾಲ ಇದ್ದಾಗ ಕೆಲಸದ ದಿನಗಳನ್ನು 150ಕ್ಕೆ ಏರಿಸಬೇಕು. ಇದರ ಬಗ್ಗೆ ಪತ್ರ ಕೊಟ್ಟಿದ್ದೇವೆ, ಇವತ್ತಿನವರೆಗೆ ಇದಕ್ಕೂ ಅನುಮತಿ ಕೊಟ್ಟಿಲ್ಲ. ಇದರೆಲ್ಲದರ ಬಗ್ಗೆ ಅಮಿತ್ ಶಾ ಅವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕಿದೆ, ಅವರಿಗೆ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

ರಣ ಕಹಳೆ ಅಂದರೇನು..? ಏನದು..?

ನಿಮ್ಮ ತವರು ಜಿಲ್ಲೆಯಿಂದ ಅಮಿತ್ ಶಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ ಎಂಬ ಪ್ರಶ್ನೆಗೆ ಮಾಧ್ಯಮಗಳ ಮೇಲೆಯೇ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ರಣ ಕಹಳೆ ಅಂದರೇನು..? ನೀವು ಬಳಸುವ ಪದ ಇದೆಯಲ್ಲ ಕಹಳೆ, ಏನದು..? ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES