Friday, May 3, 2024

ಫೆ.14 ರಂದು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ 5ನೇ ವರ್ಷದ ಶ್ರದ್ದಾಂಜಲಿ ಕಾರ್ಯಕ್ರಮ!

ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮ ಬಳಿ ಉಗ್ರರ ದಾಳಿಗೆ ಬಲಿಯಾದ 44 ಮಂದಿ ಸಿಆರ್​ಪಿಎಫ್​ ಉತಾತ್ಮ ಯೋಧರಿಗೆ ಫೆ.14 ರಂದು ಬುಧವಾರ 5ನೇ ವರ್ಷದ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಕೇಂದ್ರೀಯ ಅರೆ ಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಯಲಹಂಕಾದ ಸಿಆರ್​ಪಿಎಫ್​ ಪರೇಡ್​ ಮೈದಾನದಲ್ಲಿ 5 ನೇ ವರ್ಷದ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಲಿದೆ. ಹುತಾತ್ಮರಾದ 44 ಮಂದಿ ವೀರ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ: ವಿನಾಯಕನ ವಿಶೇಷ ಕೃಪೆ ಈ ರಾಶಿಯವರ ಮೇಲೆ ಇರಲಿದೆ!

2019, ಫೆ. 14 ರಂದು ಕಾಶ್ಮೀರದ ಬಳಿ ಇರುವ ಪುಲ್ವಾಮದಲ್ಲಿ ಕಾರ್ಯನಿರತರಾಗಿ ಬೆಂಗಾವಲು ಪಡೆಗಳ ವಾಹನದಲ್ಲಿ ತೆರಳುತ್ತಿದ್ದ ವಾಹನಗಳ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 44 ಮಂದಿ ಅರೆಸೇನಾ ಪಡೆಯ ಸಿಆರ್​ಪಿಎಫ್​ ಯೋಧರು ಹುತಾತ್ಮರಾದರು. ಇವರ ಸ್ಮರಣಾರ್ಥ ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಯೋಧರಿಂದ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​  ಹಾಗು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES