Friday, May 17, 2024

ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು​ ಇಂದು ಸಂಜೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಭೋಜನಕೂಟ ಆಯೋಜಿಸಿದ್ದಾರೆ.

ಸಂಜೆ 7.30ಕ್ಕೆ ಕ್ಯಾಬಿನೆಟ್ ಸಹೋದ್ಯೋಗಿಗಳಿಗೆ ಭೋಜನಕೂಟ ಆಯೋಜಿಸಿದ್ದಾರೆ. ಡಿ.ಕೆ. ಶಿವಕುಮಾರ್ ಭೋಜ‌ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕ್ಯಾಬಿನೆಟ್ ಸಚಿವರು ಭಾಗಿಯಾಗಲಿದ್ದಾರೆ.

ಭೋಜನ ಕೂಟದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಗೆಲ್ಲಲು ಅಗತ್ಯವಾದ ರಣತಂತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಚುನಾವಣೆ ತಯಾರಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಇನ್ನು ಪ್ರಮುಖವಾಗಿ ಕ್ಯಾಬಿನೆಟ್ ಸಚಿವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಒತ್ತಾಯಿಸಿದ್ದಾರೆ. ಹೈಪ್ರೊಪೈಲ್ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಜೆಡಿಎಸ್-ಬಿಜೆಪಿಯ ಸಾಕಷ್ಟು ನಾಯಕರು ಕಾಂಗ್ರೆಸ್ ಸೇರುತ್ತಾರೆ : ಗಣಿಗ ರವಿಕುಮಾರ್

ಬಜೆಟ್ ಮಂಡನೆ ಹಿನ್ನೆಲೆ ಡಿನ್ನರ್ ಪಾರ್ಟಿ

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಹಿನ್ನೆಲೆ ಸಚಿವರು ಹಾಗೂ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಖಾಸಗಿ ಹೋಟೆಲ್​ನಲ್ಲಿ ನಡೆದ ಔತಣಕೂಟದಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಭಾಗವಹಿಸಿದ್ದರು. ಇದೀಗ ಮತ್ತೆ ಡಿ.ಕೆ. ಶಿವಕುಮಾರ್ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ.

RELATED ARTICLES

Related Articles

TRENDING ARTICLES