ಮಂಡ್ಯ : ಜೆಡಿಎಸ್ ಹಾಗೂ ಬಿಜೆಪಿಯ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ. ನಾವು ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ಗಣಿಗ ರವಿಕುಮಾರ್ ಹೊಸ ಬಾಂಬ್ ಸಿಡಿಸಿದರು.
ಮಂಡ್ಯ ಲೋಕಾಸಭಾ ಚುನಾವಣಾ ಅಖಾಡಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಾರೆ ಎಂಬ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷದವರು ಯಾರು ಬರ್ತಾರೆ ಎಂದು ನಮಗೆ ಸಂಬಂಧಪಡಲ್ಲ. ನಮ್ಮ ಪಕ್ಷದ್ದು ನಮ್ಮದು, ಅವರ ಪಕ್ಷದ್ದು ಅವರದ್ದು. ಜನ ಯಾರು ಅಂತ ತೀರ್ಮಾನ ಮಾಡುತ್ತಾರೆ. ಹತ್ತು ದಿನದಲ್ಲಿ ಮಂಡ್ಯದಲ್ಲಿ ಬಹಳಷ್ಟು ಬದಲಾವಣೆಯಾಗುತ್ತೆ ಎಂದು ಹೇಳಿದರು.
ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ
ಮಂಡ್ಯದಲ್ಲಿ ಸ್ಟಾರ್ ಚಂದ್ರು ಪ್ರಚಾರ ವಿಚಾರವಾಗಿ ಮಾತನಾಡಿ, ಅವರೇ ಅಭ್ಯರ್ಥಿ ಎಂದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಸಮಯ ಕಡಿಮೆ ಇದ್ದು, ಎಂಟು ವಿಧಾನಸಭಾ ಕ್ಷೇತ್ರ ಸುತ್ತಬೇಕಿದೆ. ನಮ್ಮ ಕ್ಷೇತ್ರದಲ್ಲಿ ಜೊತೆಯಾಗಿ ಪ್ರಚಾರಕ್ಕೆ ಕರೆದುಕೊಂಡು ಹೋದ್ರೆ ತಪ್ಪೇನು? ಚುನಾವಣೆಗೆ ಒಂದು ತಿಂಗಳು ಮಾತ್ರ ಇದ್ದು, ಜೊತೆಯಲ್ಲಿ ಕರೆದುಕೊಂಡು ಓಡಾಡ್ತಿದ್ದೇವೆ ಎಂದು ತಿಳಿಸಿದರು.
100ಕ್ಕೆ 100ರಷ್ಟು ಎಂಪಿ ಆಗಿ ಆಯ್ಕೆಯಾಗ್ತಾರೆ
ಮಂಡ್ಯ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಸ್ಟಾರ್ ಚಂದ್ರು ಗೆದ್ದೇ ಗೆಲ್ಲುತ್ತಾರೆ. ಸ್ಟಾರ್ ಚಂದ್ರು ಅಲಿಯಾಸ್ ವೆಂಕಟೇರಮಣೇಗೌಡ ಮಂಡ್ಯ ಎಂಪಿ ಆಗುವುದರಲ್ಲಿ ಅನುಮಾನವೇ ಇಲ್ಲ. ನೂರಕ್ಕೆ ನೂರರಷ್ಟು ಎಂಪಿ ಆಗಿ ಆಯ್ಕೆಯಾಗುತ್ತಾರೆ ಎಂದು ಶಾಸಕ ಗಣಿಗ ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.