ಹಾಸನ: ವಿವಾಹಿತ ಮಹಿಳೆಯೊಬ್ಬಳು ಅನುಮಾಸ್ಪದವಾಗಿ ಸಾವನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸುರಭಿ (24) ಮೃತ ದುರ್ದೈವಿ.
ಘಟನೆಯ ವಿವರ
ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜತೆ ಮದುವೆಯಾಗಿದ್ದಾಳೆ.ಆದರೆ ನಿನ್ನೆ ಗುರುವಾರ ಅಳಿಯ ದರ್ಶನ್ ಸುರಭಿ ಪೋಷಕರಿಗೆ ಕರೆ ಮಾಡಿ,ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾನೆ.
ಅಳಿಯನ್ನೇ ನನ್ನ ಮಗಳ ಕೊಲೆ ಮಾಡಿದ್ದಾನೆ: ಪೋಷಕರು ಆರೋಪ
ಸುರಭಿ ಪೋಷಕರು, ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ದರ್ಶನ್ಕ್ಕೆ ಬೇರೊಬ್ಬರ ಜತೆ ಅಕ್ರಮ ಸಂಬಂಧವಿತ್ತು.ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟಕವಾಡುತ್ತಿದ್ದಾರೆ ಎಂದು ಸುರಭಿ ಪೋಷಕರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಮೃತದೇಹವನ್ನು ಶ್ರವಣಬೆಳಗೊಳ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.