Sunday, May 5, 2024

ಕಾಂಗ್ರೆಸ್​ ನವರು ಜಾತ್ಯತೀತರಾಗಿದ್ದರೆ ಮಸೀದಿ-ಚರ್ಚ್ ಹಣಕ್ಕೂ ಕೈಹಾಕುತ್ತಿದ್ದರು: ಸಿ.ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್​ ಪಕ್ಷವನ್ನ ಕಮ್ಯೂನಲ್ ಮತ್ತು ಕ್ರಿಮಿನಲ್ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದವರು ನಿಜವಾದ ಜಾತ್ಯತೀತರಾಗಿದ್ದರೆ ದೇವಾಲಯ ಮಾತ್ರವಲ್ಲದೆ, ಮಸೀದಿ, ಚರ್ಚ್​ ಹುಂಡಿಗೂ ಕೈಹಾಕುತ್ತಿದ್ದರು ಎಂದು ಬಿಜೆಪಿ ಹಿರಿಯ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಪಕ್ಷದವರು ನಿಜವಾಗಲೂ ಜಾತ್ಯತೀತರಾ? ನಿಜವಾದ ಜಾತ್ಯತೀತರಾಗಿದ್ದರೆ ದೇವಾಲಯದ ಹುಂಡಿ ಕಳ್ಳರಾಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ: ಬಿಜೆಪಿಯವರು ಜನರ ಭಾವನೆಗಳು, ಧರ್ಮ, ದೇವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ:ಡಿಕೆಶಿ

ಹೆಸರಿನಲ್ಲಿ ರಾಮ-ಕೃಷ್ಣ-ಶಿವ ಇದ್ದಾನೆ ಎಂದು ಹೇಳುತ್ತಾರೆ. ಹೆಸರಿನಲ್ಲಿ ದೇವರಿದ್ದರೆ ಭಕ್ತರ ಹುಂಡಿಗೆ ಕೈಹಾಕುತ್ತಿರಲಿಲ್ಲ. ಇವರು ದೇವರ ಹುಂಡಿ ಹಣಕ್ಕೂ ಕೈ ಹಾಕುತ್ತಿದ್ದಾರೆ. ಜಾತ್ಯತೀತತೆ ಅಂದರೆ ದೇವಸ್ಥಾನದ ಹುಂಡಿಗೆ ಕೈಹಾಕುವುದಾ? ಕಾಂಗ್ರೆಸ್ ಮೋಸ್ಟ್ ಕಮ್ಯುನಲ್ ಮತ್ತು ಕ್ರಿಮಿನಲ್ ಪಾರ್ಟಿ. ಜಾತ್ಯತೀತರಾಗಿದ್ದರೆ ಮಸೀದಿ-ಚರ್ಚ್ ಹಣಕ್ಕೂ ಕೈಹಾಕುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES