Monday, May 20, 2024

ಆನೇಕಲ್​: ನೀಲಗಿರಿ ತೋಪಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಆನೇಕಲ್: ನೀಲಗಿರಿ ತೋಪಿನಲ್ಲಿ ಸುಟ್ಟ ರೀತಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಆನೇಕಲ್​ನ ಕಾಳನಾಯಕನಹಳ್ಳಿ ಬಳಿ ನಡೆದಿದೆ.

ಹರ್ಷಿತ್ ಕೊಂಟಾಳ ಮೃತ ದುರ್ವೈವಿ ಎಂದು ಗುರುತಿಸಲಾಗಿದೆ. ಈತ ಆನೇಕಲ್‌ನ ಅಲಯೆನ್ಸ್​ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು,​ ಉತ್ತರಾಖಂಡ ರಾಜ್ಯದ ಹಾಲ್‌ಧ್ವನಿ ಎಂಬಲ್ಲಿನ ನಿವಾಸಿ ಎಂದು ಮಾಹಿತಿ ತಿಳಿದು ಬಂದಿದೆ.

ಹಾಸ್ಟೆಲ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆ

ಹರ್ಷಿತ್ ಕೊಂಟಾಳ ಫೆಬ್ರುವರಿ 22 ರಂದು ಹಾಸ್ಟೆಲ್​ನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಇಂದು ಬೆಳಗ್ಗೆ ಕಾಳನಾಯಕನಹಳ್ಳಿ ಬಳಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಹಾಕಿರುವಂತೆ ಶವ ಸಿಕ್ಕಿದೆ. ಮೃತದೇಹದ ಪಕ್ಕ ಕಾಲೇಜು ಬ್ಯಾಗ್​, ಮೊಬೈಲ್​ ದೊರೆತಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿ ಹಾಸ್ಟೆಲ್ ಹೊರಗಡೆ ಕಾಣಿಸಿಕೊಂಡ ಕೊನೆಯ ವಿಡಿಯೋ ಲಭ್ಯವಾಗಿತ್ತು. ಈ ವಿಡಿಯೋ ಜೊತೆಗೆ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.

RELATED ARTICLES

Related Articles

TRENDING ARTICLES