ಆನೇಕಲ್ : ಹಳೇ ವೈಷಮ್ಯದ ಹಿನ್ನೆಲೆ ನಡುರಸ್ತೆಯಲ್ಲೇ ಯುವಕನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ನ ಮರಸೂರ ಬಳಿ ನಡೆದಿದೆ.
ವಿಜಯ್ ಕುಮಾರ್, (27 ವರ್ಷ) ಕೊಲೆಯಾದ ಯುವಕ, ಇಂದು ಬೆಳ್ಳಂ ಬೆಳಗ್ಗೆ 4 ಗಂಟೆ ಸುಮಾರಿನಲ್ಲಿ ವಿಜಯ್ ನನ್ನು ತನ್ನ ಮನೆಯಿಂದ ಹೊರಗೆ ಕರೆದು ನಡುರಸ್ತೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಲಾಗಿದೆ.
ಇದನ್ನೂ ಓದಿ: ದೇಶದ ಅತಿ ಉದ್ದದ ಕೇಬಲ್ ಬ್ರಿಡ್ಜ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ
2017ರಲ್ಲಿ ಮನೋಜ್ ಎಂಬ ಯುವಕನ ಕೊಲೆ ಕೇಸ್ನಲ್ಲಿ ವಿಜಯ್ ಕುಮಾರ್ ಭಾಗಿಯಾಗಿದ್ದ ಈ ಅಪರಾಧಕ್ಕೆ ಜೈಲು ಶಿಕ್ಷೆ ಅನುಭವಿಸಿ ಕಳೆದ 7 ತಿಂಗಳ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ಈತನನ್ನು ಇಂದು ಬೆಳಗ್ಗೆ ಹೊಂಚುಹಾಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಹಳೆ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗುತ್ತಿದ್ದು ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.