Friday, May 17, 2024

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ!

ಆನೇಕಲ್​ : ಹಳೇ ವೈಷಮ್ಯದ ಹಿನ್ನೆಲೆ ನಡುರಸ್ತೆಯಲ್ಲೇ ಯುವಕನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್​ನ ಮರಸೂರ ಬಳಿ ನಡೆದಿದೆ.

ವಿಜಯ್​ ಕುಮಾರ್​, (27 ವರ್ಷ) ಕೊಲೆಯಾದ ಯುವಕ, ಇಂದು ಬೆಳ್ಳಂ ಬೆಳಗ್ಗೆ 4 ಗಂಟೆ ಸುಮಾರಿನಲ್ಲಿ ವಿಜಯ್​ ನನ್ನು ತನ್ನ ಮನೆಯಿಂದ ಹೊರಗೆ ಕರೆದು ನಡುರಸ್ತೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ದೇಶದ ಅತಿ ಉದ್ದದ ಕೇಬಲ್ ಬ್ರಿಡ್ಜ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

2017ರಲ್ಲಿ ಮನೋಜ್​ ಎಂಬ ಯುವಕನ ಕೊಲೆ ಕೇಸ್​ನಲ್ಲಿ ವಿಜಯ್​ ಕುಮಾರ್ ಭಾಗಿಯಾಗಿದ್ದ ಈ ಅಪರಾಧಕ್ಕೆ ಜೈಲು ಶಿಕ್ಷೆ ಅನುಭವಿಸಿ ಕಳೆದ 7 ತಿಂಗಳ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ಈತನನ್ನು ಇಂದು ಬೆಳಗ್ಗೆ ಹೊಂಚುಹಾಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಹಳೆ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗುತ್ತಿದ್ದು ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES