ಕುಂದಾಪುರ : ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ತಲ್ಲೂರು ಹೇರಿಕುದ್ರು ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಬೈಂದೂರು ಸಮೀಪದ ನಾಗೂರು ಮೂಲದ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಮೃತ ಸವಾರರಾಗಿದ್ದಾರೆ.
ಮುಹಮ್ಮದ್ ಫರ್ವೇಝ್ ಉತ್ತಮ ಕ್ರೀಡಾಪಟುವಾಗಿದ್ದರು. ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಸಂಬಂಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭಿರ ಗಾಯಗೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಅವರಾದ ಬಿ ಬಳಿ ನಡೆದಿದೆ. ಗುರುನಾಥ್(46), ಸಂಗೀತಾ(35) ಸಾವನ್ನಪ್ಪಿರುವ ದುರ್ದೈವಿಗಳು.
ಲಕ್ಷ್ಮಣ ಎಂಬುವವರು ಗಾಯಯೊಂಡಿದ್ದಾರೆ. ಬೆಳಗ್ಗೆ ಕಲಬುರಗಿಯಿಂದ ಬಸವಕಲ್ಯಾಣದಲ್ಲಿ ಸಂಬಂಧಿಕರ ಮದುವೆಗೆ ಬೈಕ್ ಮೇಲೆ ತ್ರಿಬಲ್ ರೈಡ್ ಹೋಗುವಾಗ ಅವಘಡ ಸಂಭವಿಸಿದೆ. ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.