ವಿಜಯಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನೇ ವಿಜಯಪುರ ಎಸ್ ಸಿ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಎಸ್ ಸಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ.ನನಗೆ ಈಗಾಗಲೇ ಪಕ್ಷದಿಂದ ಸೂಚನೆಗಳು ಬಂದಿದೆ. ನನಗೆ ಈ ಭಾಗದ ಜನ ವೋಟ್ ಹಾಕ್ತಾರೆ ಅನ್ನೋ ವಿಶ್ವಾಸವಿದೆ ಎಂದರು.
ನಾನು ವಿಜಯಪುರ ಕ್ಷೇತ್ರಕ್ಕೆ1ಲಕ್ಷ ಕೋಟಿ ಕೋಟಿ ಅನುದಾನ ತಂದಿರುವೆ. ಜೆಡಿಎಸ್ ಜೊತೆ ಮೈತ್ರಿ ಹಿನ್ನೆಲೆ, ವಿಜಯಪುರ ಕ್ಷೇತ್ರವನ್ನು ಜೆಡಿಎಸ್ ನವರು ಕೇಳ್ತಾರೆ ನಮ್ಮವರು ಯಾವ ಕಾಲಕ್ಕೂ ಕ್ಷೇತ್ರ ಬಿಟ್ಟು ಕೊಡಲ್ಲ. ಅಂದ್ರೆ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಟ್ಟರೆ ಪ್ರಚಾರ ಮಾಡ್ತೀನಿ ಎಂದ ರಮೇಶ ಜಿಗಜಿಣಗಿ ಹೇಳಿದ್ದರು.