Sunday, May 12, 2024

ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿ

ಬೀದರ್ : ಮೀನು ಹಿಡಿಯಲು‌ ಕೆರೆಗೆ ಹೋದ ವ್ಯಕ್ತಿಯೊಬ್ಬ ನೀರುಪಾಲಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾಮುನಗರ ಗ್ರಾಮದಲ್ಲಿ ನಡೆದಿದೆ.

ಪಾಂಡು ರಾಠೋಡ್ (42) ನಾಪತ್ತೆ ಆಗಿರುವ ವ್ಯಕ್ತಿಯಾಗಿದ್ದಾನೆ. ಗ್ರಾಮದ ಹೊರವಲಯದಲ್ಲಿರುವ ಹತ್ಯಾಳ ಕೆರೆಯಲ್ಲಿ ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೀನು ಹಿಡಿಯಲು ತೆರಳಿದ್ದ ವೇಳೆ ನೀರು ಪಾಲಾಗಿದ್ದಾನೆ.

ಪಾಂಡು ರಾಠೋಡ‌ನಿಗೆ ಪತ್ನಿ ಹಾಗೂ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಪಾಂಡು ರಾಠೋಡ್ ನಾಪತ್ತೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಪತ್ತೆಯಾಗಿರುವ ಪಾಂಡುಗಾಗಿ ಎರಡು ದಿನಗಳಿಂದ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಬಸವಕಲ್ಯಾಣ ಎಸಿ, ತಹಶೀಲ್ದಾರ, ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಪತ್ತೆಯಾಗಿರುವ ವ್ಯಕ್ತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES