ಬೆಂಗಳೂರು : ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ. ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ರೆಡ್ಡಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
1950ನೇ ಇಸವಿಯಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಮೊದಲ ಚುನಾವಣೆಯಲ್ಲಿ ಕೆ.ಸಿ.ರೆಡ್ಡಿಯವರೇ ಮೊದಲ ಮುಖ್ಯಮಂತ್ರಿಯಾದರು. ಅವರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ತಿಳಿಸಿದರು.
ಕೆ.ಸಿ. ರೆಡ್ಡಿಯವರ 48ನೇ ಪುಣ್ಯತಿಥಿಯನ್ನು ಇಂದು ಆಚರಿಸಲಾಗಿದೆ. ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿ ರಾಜ್ಯದ ಬೆಳವಣಿಗೆಗೆ ಅಡಿಪಾಯ ಹಾಕಿದವರು. ಸ್ವಾತಂತ್ರ್ಯ ಹೋರಾಟಗಾರರಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಇಂದು ಆರ್ಥಿಕವಾಗಿ ಸದೃಢವಾಗಿದ್ದರೆ ಅವರು ಹಾಕಿದ ಬುನಾದಿಯೇ ಕಾರಣ ಎಂದು ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ @siddaramaiah ಅವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. pic.twitter.com/0Z7mHTRMEK
— CM of Karnataka (@CMofKarnataka) February 27, 2024