ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿಯ ಜೊತೆಗಿನ ಮುನಿಸು ಮರೆತು ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಮತದಾನದ ಬಗ್ಗೆ ಇದ್ದ ಗೊಂದಲಕ್ಕೆ ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ನಮಗೆ ವಿಪ್ ಜಾರಿ ಮಾಡಿದೆ. ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ತಮ್ಮ ಮತದಾನದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದರು.
ಪಕ್ಷದ ಚಟುವಟಿಕೆಯಿಂದ ದೂರ ಉಳಿದ್ದರೂ ಅಧಿವೇಶನಕ್ಕೂ ಸಹ ಗೈರಾಗಿದ್ದರು. ಪಕ್ಷದ ಮುಖಂಡರು ಕಂದಕೂರ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದರು.