Sunday, September 8, 2024

ಇವತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರುತ್ತಾರೆ : ಸಂತೋಷ್ ಲಾಡ್ ಹೊಸ ಬಾಂಬ್

ಹೊಸಪೇಟೆ : ಇವತ್ತು ಶಿವರಾಂ ಹೆಬ್ಬಾ‌ರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನಲಾಗುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದರು.

ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕನ್ಪರ್ಮ್ ಆಗಿ ಹೇಳಲಾಗುವುದಿಲ್ಲ. ಬಿಜೆಪಿಯವರ ಮೇಲೆ ವಿಶ್ವಾಸವಿಲ್ಲ ಎಂದು ತಿಳಿಸಿದರು.

ರಾಜ್ಯಸಭೆ ಚುನಾವಣೆ ವಿಚಾರ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅಡ್ಡ ಮತದಾನ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಪ್ರಜಾಪ್ರಭುತ್ವ ಉಳಿಸಲು ರೆಸಾರ್ಟ್ ವಾಸ್ತವ್ಯ ಅನಿವಾರ್ಯ. ಗೆಲ್ಲುವ ವಿಶ್ವಾಸವಿದ್ದರೂ ರೆಸಾರ್ಟ್ ಹೋಗುವುದು ಅನಿವಾರ್ಯವಾಗಿತ್ತು. ಕರ್ನಾಟಕ, ಮಧ್ಯಪ್ರದೇಶ, ಗೋವಾ ಏನಾಗಿದೆ ಅಂತ ಗೊತ್ತು. ಅದೇ ರೀತಿಯಾಗಿ ಚಂಡಿಗಡ್ ಮೇಯರ್ ಚುನಾವಣೆಯಲ್ಲಿ ಏನಾಯಿತು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.

ರಾಜಕೀಯಕ್ಕೆ ಮತ್ತು ಕಾರ್ಯಕ್ರಮಕ್ಕೆ ಸಂಬಂಧವಿಲ್ಲ

ಬಸವೇಶ್ವರ ಮತ್ತು ಅಂಬೇಡ್ಕರ್ ಅವರ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಇದೆ. ರಾಜಕೀಯಕ್ಕೆ ಮತ್ತು ಈ ಕಾರ್ಯಕ್ರಮಕ್ಕೆ ಸಂಬಂಧವಿಲ್ಲ. ಕಳೆದ ವರ್ಷವೇ ಬಿಡುಗಡೆ ಮಾಡಬೇಕಿತ್ತು. ಚುನಾವಣೆ ಹಿನ್ನಲೆ ಬಿಡುಗಡೆ ಮಾಡಲಾಗಿರಲಿಲ್ಲ. ಆಡಿಯೋ ಮೂಲಕ ಅಂಬೇಡ್ಕರ್ ಮತ್ತು ಬಸವಣ್ಣನವರ ಕುರಿತು ಜನರಿಗೆ ತಿಳಿಸಬೇಕಿದೆ. ಅಂಬೇಡ್ಕರ್, ಬಸವಣ್ಣನವರ ಜೀವನ, ಸಾಧನೆ ಮತ್ತು ಜನತೆಗೆ ಅವರು ನೀಡಿದ ಮಾರ್ಗದರ್ಶನ ಯುವಜನರಿಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಸಂತೋಷ್ ಲಾಡ್ ಹೇಳಿದರು.

RELATED ARTICLES

Related Articles

TRENDING ARTICLES