Monday, May 20, 2024

ಪಾಕಿಸ್ತಾನ ಜಿಂದಾಬಾದ್ ಘೋಷಣೆ : ಕೂಡಲೇ ಆ ಎಲ್ಲ ದೇಶದ್ರೋಹಿಗಳನ್ನು ಬಂಧಿಸಿ : ಕಟೀಲ್ ಆಗ್ರಹ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರೇ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆ ಎಲ್ಲ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಘೋಷಣೆ ಕೂಗಿದವರನ್ನು ಬಂಧಿಸಿ, ಘಟನೆಯ ಕೂಲಂಕಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸದಾ ದೇಶದ್ರೋಹಿಗಳನ್ನು ಪೊರೆಯುವ ಪಕ್ಷ. ಇಂದು ಆ ವಿಷಜಂತುಗಳನ್ನು ವಿಧಾನಸೌಧದ ಆವರಣದೊಳಗೆ ಬರುವಷ್ಟು ಓಲೈಕೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

ವಿಧಾನಸೌಧದ ಆವರಣದಲ್ಲೇ ಶತ್ರು ಪಾಕಿಸ್ತಾನದ ಪರ ಕಾಂಗ್ರೆಸ್ ಪಕ್ಷದ ನಾಸಿರ್ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಈ ಮೂಲಕ ನಮಗ್ಯಾವ ಭಯವಿಲ್ಲ ಎಂದು ಸಾರಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಈ ಘಟನೆ ಜ್ವಲಂತ ಸಾಕ್ಷಿ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES