ಚಿಕ್ಕಮಂಗಳೂರು: ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ರಾಜ್ಯಸಭಾ ಚುನಾವಣೆಯಲ್ಲಿಅಡ್ಡ ಮತದಾನ ಮಾಡಿ ರಾಜಕೀಯ ವ್ಯಭಿಚಾರ ಮಾಡಿದ್ಧಾರೆ ಎಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಸಿ.ಟಿ. ರವಿ ಅವರು ಅಡ್ಡ ಮತದಾನ ರಾಜಕೀಯ ವ್ಯಭಿಚಾರಕ್ಕೆ ಸಮ. ಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗ್ತೀವಿ. ಆದರೆ, ರಾಜಕಾರಣದ ವ್ಯಭೀಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ. ಹಾರ್ಡ್ ಕೋರ್, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡೋರು ನಿಷ್ಠುರಕ್ಕೆ ಒಳಗಾಗುತ್ತಾರೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಎಸ್.ಟಿ. ಸೋಮಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ಹೊಂದಾಣಿಕೆ ಮಾಡಿಕೊಳ್ಳುವವರು ನಮ್ಮ ಪಕ್ಷದ ಸಿಎಂ ಮಾತ್ರವಲ್ಲ, ಬೇರೆ ಪಕ್ಷದ ಸಿಎಂ ಬಳಿಯೂ ಚೆನ್ನಾಗಿರ್ತಾರೆ ಎಂದು ಹೇಳಿದ ಅವರು, ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಅದರಲ್ಲೂ ಒಂದು ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡೋದರ ಬಗ್ಗೆ ಸಹನೆ ಇರಲೇಬಾರದು ಎಂದು ಹೇಳಿದರು. ಈ ಮೂಲಕ ಅಡ್ಡ ಮತದಾನ ಮಾಡಿದ ಎಸ್.ಟಿ. ಸೋಮಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಪರೋಕ್ಷವಾಗಿ ಹೇಳಿದರು.