ಬಳ್ಳಾರಿ: ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ವಿಧಾನಸೌಧದಲ್ಲಿ ಸೈಯದ್ ನಾಸೀರ್ ಹುಸೇನ್ ಅವರ ಬೆಂಗಲಿಗರು ಪಾಕಿಸ್ತಾನ ಜಿಂದಾಬಾದ್ ಕೂಗು ಕೂಗಿರುವ ಆರೋಪದ ಬೆನ್ನಲ್ಲೇ ನಾಸಿರ್ ಹುಸೇನ್ ಅವರ ಬಳ್ಳಾರಿಯ ಕಚೇರಿಯ ಮುಂದೆ ಭಾರೀ ಹೈಡ್ರಾಮಾ ನಡೆಯಿತು.
ಪಾಕ್ ಪರವಾಗಿ ಘೋಷಣೆ ಕೂಗಿದ ಆರೋಪ ಹಿನ್ನೆಲೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಇಂದು ಬಳ್ಳಾರಿಯ ಮೋತಿ ಸರ್ಕಲ್ ಬಳಿಯ ಬೂಡಾ ಕಚೇರಿಯ ಆವರಣದಲ್ಲಿರುವ ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಇದನ್ನೂ ಓದಿ: ಅತ್ತೆಯ ರುಂಡ ಮುಂಡ ಬೇರ್ಪಡಿಸಿದ ಸೋದರಳಿಯ!
ಕಚೇರಿ ಮುಂದೆ ಹಾಕಿದ್ದ ನಾಮಫಲಕ ಕಿತ್ತು ಹಾಕಲು ಕಾರ್ಯಕರ್ತರು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.