ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೊಂದು ದೂರು ದಾಖಲಾಗಿದೆ.
ರೇಣುಕಮ್ಮ ಎಂಬುವವರು ನೀಡಿದ ಖಾಸಗಿ ದೂರಿನ ಅನ್ವಯ ಬೆಂಗಳೂರಿನ 37ನೇ ಎಸಿಎಂಎಂ (ACMM) ನ್ಯಾಯಾಲಯದಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಮಾರ್ಚ್ 1ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದೆ. ಐಪಿಸಿ ಸೆಕ್ಷನ್ 295(ಎ), 298, 504, 509 ಅಡಿಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? : ನಿಮ್ಮ ಪ್ರೀತಿ-ಅಭಿಮಾನಕ್ಕೆ ಬೆಲೆ ಕಟ್ಟಲು ಆಗಲ್ಲ, ‘ಧನ್ಯೋಸ್ಮಿ ಕರ್ನಾಟಕ’ : ನಟ ದರ್ಶನ್
ನಟ ದರ್ಶನ್ ಅವರಿಗೆ ವಿವಾದಗಳು ಹೊಸದೇನಲ್ಲ. ಅವರ ವಿರುದ್ಧ ಈಗಾಗಲೇ ಫಿಲಂ ಚೇಂಬರ್ನಲ್ಲಿ ಹಾಗೂ ವಿವಿಧ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ. ಅಯ್ಯೋ ತಗಡೇ.. ಗುಮ್ಮಸ್ಕೋತಿಯಾ ಎಂಬ ಪದ ಬಳಕೆ ಮೂಲಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರಿಗೆ ಧಮ್ಕಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಮಹಿಳೆಯರ ಬಗೆಗಿನ ಹೇಳಿಕೆ ವಿರುದ್ಧವೂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.