Tuesday, May 21, 2024

ಪಾಕ್​ ಪರ ಘೋಷಣೆ: ಕಾಂಗ್ರೆಸ್ ಜಿನ್ನಾ ಸಂಸ್ಕೃತಿ ಮುಂದುವರಿಸುತ್ತಿದೆ: ಕೆ.ಎಸ್ ಈಶ್ವರಪ್ಪ

ಬೆಂಗಳೂರು: ನಿನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ಘಟನೆ ನೋಡುತ್ತಿದ್ದರೆ ರಾಜ್ಯ ಸರಕಾರ ಪಾಕಿಸ್ತಾನದ ಪರವಾಗಿ ಇದೆಯಾ ಅಥವಾ ಭಾರತ ದೇಶದ‌ ಪರವಾಗಿ ಇದೆಯಾ ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಜಿನ್ನಾ ಸಂಸ್ಕೃತಿ ಮುಂದುವರಿಸುತ್ತಿದ್ದು, ಈ ಘಟನೆಯಿಂದ ಕಾಂಗ್ರೆಸ್ ಶಾಸಕರು ತಲೆ ತಗ್ಗಿಸುವಂತಾಯ್ತು. ಇದನ್ನು ಕಾಂಗ್ರೆಸ್ ಶಾಸಕರು ಖಂಡಿಸಬೇಕು. ಜೊತೆಗೆ ನಾಸೀರ್ ಹುಸೇನ್ ರಾಜ್ಯದ ಜನರ ಕ್ಷಮೆ ಕೇಳಬೇಕು. ಪಾಕಿಸ್ತಾನದ ಪರವಾಗಿ ನಾವಿದ್ದರೆ ಹೆಚ್ಚಿನ ಬಲ ಸಿಗುತ್ತದೆ ಎಂಬ ಭ್ರಮೆ ಕಾಂಗ್ರೆಸ್ ನಾಯಕರದ್ದಾಗಿದೆ. ಕಾಂಗ್ರೆಸ್ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.

ಇದನ್ನೂ ಓದಿ: ದಿನ ಭವಿಷ್ಯ: ಇಂದು ದ್ವಿಜಪ್ರಿಯ ಸಂಕಷ್ಟ ಚತುರ್ಥಿ, ಈ ರಾಶಿಗೆ ಗಣೇಶನ ವಿಶೇಷ ಕೃಪೆ!

ಮುಸ್ಲಿಂರ ಸಂತೃಪ್ತಿಪಡಿಸೋದು ನಮ್ಮ ಹಕ್ಕು ಎಂಬುದು ಕಾಂಗ್ರೆಸ್ ನದ್ದಾಗಿದೆ. ಕಾಶ್ಮೀರದಲ್ಲಿ ಈ ರೀತಿ ನಡೆಯುತಿತ್ತು. ಅದರ ಛಾಯೆ ಕರ್ನಾಟಕದ ಮೇಲೆ ಬೀಳುತ್ತಿದೆ. ಅಂತಹ ವ್ಯಕ್ತಿಯನ್ನ ರಾಜ್ಯ ಸಭೆಗೆ ಆಯ್ಕೆ ಮಾಡಿರುವುದು ತುಂಬಾ ನೋವಾಗಿದೆ ಎಂದ್ರು.

RELATED ARTICLES

Related Articles

TRENDING ARTICLES