ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ವಿವಾದ ಬಿರುಗಾಳಿಯೆಬ್ಬಿಸಿರುವ ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಅಧಿಕೃತವಾಗಿ ವರದಿಯ ಪ್ರತಿಯನ್ನು ಸಲ್ಲಿಕೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಅವರ ನೇತೃತ್ವದಲ್ಲಿ ಸಿದ್ಧಪಡಿಸಲಾಗಿದ್ದ ವರದಿಯಲ್ಲಿ ಸಾಕಷ್ಟು ಲೋಪದೋಷಗಳಿವೆ, ಈ ವರದಿಯನ್ನು ಎ.ಸಿ. ರೂಮುಗಳಲ್ಲಿ ಕುಳಿತುಕೊಂಡು ಬರೆಯಲಾಗಿದೆ ಎಂದು ಆರೋಪಗಳು ಕೇಳಿ ಬಂದಿದ್ದವು. ಅದಕ್ಕಾಗಿ ಲೋಪದೋಷಗಳನ್ನು ಸರಿಪಡಿಸಲು ತಜ್ಞರ ಸಲಹೆಯನ್ನು ಪಡೆಯಲಾಗುತ್ತದೆ ಎಂದು ಹೇಳಿದ್ದರು.
ಅದಾಗಿ ಕೆಲವು ದಿನಗಳ ನಂತರ ಇದೀಗ ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ.