ಧಾರವಾಡ: ಮಲಗುವಾಗ ಮಗು ಅಳುತ್ತದೆ ಎಂಬ ಕಾರಣಕ್ಕೆ ಪಾಪಿ ತಂದೆಯೊಬ್ಬ ಎಳೆ ಮಗುವನ್ನು ಗೋಡೆಗೆ ಎಸೆದು ಬೀಸಾಡಿರುವ ಅಮಾನವೀಯ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ.
ಶಂಬುಲಿಂಗಯ್ಯ ಶಾಪುರಮಠ ಮಗುವನ್ನು ಎತ್ತಿ ಗೋಡೆಗೆ ಎಸೆದ ಪಾಪಿ ತಂದೆ. ಒಂದು ವರ್ಷದ ಹೆಣ್ಣು ಮಗು ಸಾವು ಬದುಕಿನ ಮಧ್ಯೆ ಕಿಮ್ಸ್ ಆಸ್ಪತ್ರೆಯಲ್ಲಿ ಹೋರಾಟ ಮಾಡುತ್ತಿದೆ. ಕಳೆದ ರಾತ್ರಿ ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ. ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ.
ಇದನ್ನೂ ಓದಿ: ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ