Sunday, April 28, 2024

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ!

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆಯಂತೆಯೇ ಅದೇ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆ ಸೀರೆ ಕಳಚಿ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಯನ್ನು ಅರೆ ಬೆತ್ತಲೆ ಮಾಡಿ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಪಶು ಆಸ್ಪತ್ರೆಯ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ: ಜನರ ವಿರೋಧ

ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ಎಂಬುವವರು ಸರ್ಕಾರಿ ರಸ್ತೆ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ್ದ ಜಮೀನು ‌ಒತ್ತುವರಿ ಮಾಡಿಕೊಂಡಿದ್ದರು. ಸರ್ಕಾರ ನೀಡಿದ್ದ ಜಮೀನು ‌ಒತ್ತುವರಿ ಮಾಡಿಕೊಂಡಿರುವುದನ್ನು ಬಡ ಮಹಿಳೆ ಪ್ರಶ್ನೆ ಮಾಡಿದರು. ಇದರಿಂದ ರೊಚ್ಚಿಗೆದ್ದ ಆರೋಪಿಗಳು ಮಹಿಳೆ ಸೀರೆ ಕಳಚಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ.

RELATED ARTICLES

Related Articles

TRENDING ARTICLES