ನವದೆಹಲಿ : ಪಾಕಿಸ್ತಾನ ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕುಟುಕಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಪಾಕಿಸ್ತಾನ ಮತ್ತು ಕಾಂಗ್ರೆಸ್ ಸ್ಥಿತಿ ಒಂದೇ ರೀತಿಯದ್ದಾಗಿದೆ ಎಂದು ಟೀಕಿಸಿದರು.
ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಎಲ್ಲ ಮಾಧ್ಯಮದಲ್ಲೂ ವಿಚಾರ ಬಂದಿದೆ, ನೋಡಿದ್ದೇನೆ. ಆ ವ್ಯಕ್ತಿಯನ್ನು ಸರ್ಕಲ್ ಮಾಡಿ ಗುರುತಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಇನ್ನು ಆ ವ್ಯಕ್ತಿಯನ್ನು ವಿಚಾರಣೆ ಮಾಡಿಲ್ಲ. ಇದು ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಊಹಾಪೋಹಗಳಮೇಲೆ ನಾನು ಉತ್ತರ ಕೊಡಲ್ಲ
ಚುನಾವಣಾ ಸಮಿತಿ ಸಭೆ ಬಗ್ಗೆ ಮಾತನಾಡಿದ ಅವರು, ಚುನಾವಣಾ ಸಮಿತಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ಆ ವಿಚಾರ ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟದ್ದು. ಊಹಾಪೋಹಗಳ ಮೇಲೆ ನಾನು ಉತ್ತರ ಕೊಡುವುದಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದರು.