Friday, May 17, 2024

ಮಹಿಳೆಯ ಕೊಂದು ಪಾಳು ಮನೆಗೆ ಬಿಸಾಡಿದ ಹಂತಕ

ಬೆಂಗಳೂರು : ಬೆಂಗಳೂರಿನ ಶಾಂತಿನಗರ ಡಬ್ಬಲ್ ರೋಡ್‌ನ ಜನತಾ ಕೋ-ಆಪರೇಟಿವ್ ಬ್ಯಾಂಕ್ ಕಟ್ಟಡ ಸಮೀಪ ಪಾಳು ಬಿದ್ದ ಕಟ್ಟಡದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣ ನಡೆಸಿದ ಪೊಲೀಸರಿಗೆ ಟ್ವಿಸ್ಟ್ ಸಿಕ್ಕಿದೆ.

ಅನುಮಾನಾಸ್ಪದ ಸಾವು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ, ಮಹಿಳೆಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Rameshwaram Cafe: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಐವರು ಆಸ್ಪತ್ರೆಗೆ ದಾಖಲು

ಮಹಿಳೆಯನ್ನು ಆಟೋದಲ್ಲಿ ಬೆಳಗಿನ ಜಾವ ಕರೆದೊಯ್ದು ಅತ್ಯಾಚಾರ ಎಸಲಾಗಿದೆ. ನಂತರ ಕಟ್ಟಡದಿಂದ ತಳ್ಳಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಬಳಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಸಾಬೀತಾಗಿದೆ.

ಪಾಳು ಬಿದ್ದ ಕಟ್ಟಡದಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣಕ್ಕೆ ಸ್ಥಳೀಯರು ಒಳಹೊಕ್ಕು ನೋಡಿದಾಗ ಮಹಿಳೆಯ ಮೃತದೇಹವು ಕಂಡಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಎಸ್ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮೃತಳು ಯಾರು, ಯಾಕಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದರ ತಿಳಿದಿರಲಿಲ್ಲ. ಹೀಗಾಗಿ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಇದೀಗ ಪ್ರಕರಣ ಸಂಬಂಧ ಮುಬಾರಕ್ ಎಂಬಾತನನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.

RELATED ARTICLES

Related Articles

TRENDING ARTICLES