Sunday, May 12, 2024

ರಾಮೇಶ್ವರ ಕೆಫೆ ಸ್ಫೋಟ : ಮೇಲ್ನೋಟಕ್ಕೆ ಯೋಜಿತ ಬಾಂಬ್ ಸ್ಫೋಟ ಎನಿಸುತ್ತೆ : ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟದ ಬಗ್ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದು, ಮೇಲ್ನೋಟಕ್ಕೆ ಯೋಜಿತ ಬಾಂಬ್ ಸ್ಫೋಟ ಎನಿಸುತ್ತದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ರಾಮೇಶ್ವರಂ ಕೆಫೆ ಮಾಲೀಕ ನಾಗರಾಜ್ ಅವರ ಜೊತೆ ಮಾತನಾಡಿದ್ದೇನೆ. ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇದು ಬಾಂಬ್ ಸ್ಫೋಟದ ಸ್ಪಷ್ಟ ಪ್ರಕರಣವಾಗಿದೆ ಎಂದು ಹೇಳಿದ್ದಾರೆ.

ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ

ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ. ಯಾವುದೇ ಸಿಲಿಂಡರ್ ಸ್ಫೋಟಗೊಂಡಿಲ್ಲ ಎಂದು ಮಾಲೀಕರು ನನಗೆ ತಿಳಿಸಿದ್ದಾರೆ. ರೆಸ್ಟೋರೆಂಟ್​ನ ಒಬ್ಬ ಉದ್ಯೋಗಿ ಗಾಯಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಸ್ಫೋಟದ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES