ಮೈಸೂರು : ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ, ಕಾಂಗ್ರೆಸ್ನ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ ಎಂದು ಹೇಳಿದ್ದಾರೆ.
136 ಸ್ಥಾನವಿದ್ದರೂ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಸರ್ಕಾರಗಳನ್ನು ಬೀಳಿಸುವುದು ಅಭ್ಯಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು ಸತ್ಯ
ರಾಮೇಶ್ವರ ಕೆಫೆಯಲ್ಲಿ ಸ್ಫೋಟದ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು ಸತ್ಯ. ಕೆಫೆಯಲ್ಲಿ IED ಬಳಸಿ ಸ್ಫೋಟಿಸಲಾಗಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತಾಡಿದ್ದೇನೆ. ಒಬ್ಬ ವ್ಯಕ್ತಿ ಬ್ಯಾಗ್ ಇರಿಸಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಕೆಫೆಯ ಕ್ಯಾಶಿಯರ್ನಿಂದ ಮಾಹಿತಿ ಸಂಗ್ರಹಿಸಲಾಗಿದೆ. ಇದರಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.