Thursday, May 2, 2024

ರಾಮೇಶ್ವರಂ ಕೆಫೆ ಸ್ಫೋಟ : ಬೆಂಗಳೂರಿನಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ : ಡಿ.ಕೆ. ಶಿವಕುಮಾರ್

ತುಮಕೂರು : ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ತುಮಕೂರಿನ ಕುಣಿಗಲ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಯಾರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.

ನಮ್ಮ ಆಫೀಸರ್ಸ್ ತನಿಖೆ ಮಾಡುತ್ತಿದ್ದಾರೆ. ಯಾರು ಸ್ಫೋಟ ಮಾಡಿದ್ದಾರೆ? ಏನು ಮಾಡಿದ್ದಾರೆ? ಬೇಕು ಅಂತ ಮಾಡಿದ್ದಾರೆಯೇ? ಯಾರೇ ಆದರೂ ಸರಿ, ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಎಲ್ಲವನ್ನು ನಾವು ನೋಡುತ್ತಿದ್ದೇವೆ. ಕೆಲವರು ಇಂತಹ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಇನ್ನು ಹೆಚ್ಚಿನ ಮಾಹಿತಿ ತೆಗೆದುಕೊಂದು ಮಾತನಾಡುತ್ತೇನೆ ಎಂದು ತಿಳಿಸಿದರು.

ಪ್ರಕರಣದ ಎಲ್ಲಾ ವಿಡಿಯೋಗಳು ಇದೆ

ಸ್ಫೋಟ ಪ್ರಕರಣ ಸಂಬಂಧ ಎಲ್ಲಾ ವಿಡಿಯೋಗಳು ಇದೆ. ಸ್ಫೋಟ ಸ್ಥಳದ ಎರಡು ಮೂರು ಕಿಲೋಮೀಟರ್ ಯಾರು ಯಾರು ಟ್ರಾವಲ್ ಮಾಡಿದ್ದಾರೆ ಎಂಬ ಸಂಪೂರ್ಣ ಲೆಕ್ಕಾಚಾರ ಇದೆ. ಸದ್ಯಕ್ಕೆ ಯಾರು ಆತಂಕ ಪಡುವ ಅಗತ್ಯ ಇಲ್ಲ. ನಮ್ಮ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಯಾರಿಗೆ ಏನು ತೊಂದರೆ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

RELATED ARTICLES

Related Articles

TRENDING ARTICLES