ದಾವಣಗೆರೆ: ಎರಡು ಬೈಕ್ಗಳು ಮುಕಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಕೆ.ರಾಮೇನಹಳ್ಳಿ ಗ್ರಾಮದ ರಾಮಪ್ಪ(55) ಸಾವನ್ನಪ್ಪಿದ ದುರ್ದೈವಿ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಅತಿ ವೇಗದಲ್ಲಿದ್ದ ಹಿನ್ನಲೆ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿದೆ.
ಸ್ಥಳಕ್ಕೆ ಚನ್ನಗಿರಿ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚನ್ನಗಿರಿ ಪೊಲೀಸ್ ಠಾಣೆಯಲ್ಲ ದಾಖಲಾಗಿದೆ.