ಬೆಂಗಳೂರು : ಕುಂದಲಹಳ್ಳಿಯ ರಾಮೇಶ್ವರ ಕೆಫೆ ಸ್ಫೋಟ ಸಂಬಂಧ ಗಾಯಾಳುಗಳಿಗೆ ಸರ್ಕಾರದಿಂದ ಅಗತ್ಯ ನೆರವು ಒದಗಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು. ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟದಿಂದ 9 ಜನ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕೆಫೆ ಸ್ಫೋಟ ಪ್ರಕರಣ ಸಹಜವಾಗಿಯೇ ಆತಂಕಕ್ಕೀಡು ಮಾಡಿದೆ. ಸ್ಫೋಟದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು NIA ಹಾಗೂ IBಗೂ ಮಾಹಿತಿ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದಿಂದ ಅಗತ್ಯ ನೆರವು
ಸ್ಫೋಟ ಸಂಬಂಧ ಪೊಲೀಸರು ಶೀಘ್ರದಲ್ಲೇ ಸ್ಫೋಟದ ಕಾರಣ ಕಂಡುಹಿಡಿಯಲಿದ್ದಾರೆ. ಜನರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ವಿನಂತಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ಪೋಸ್ಟ್ ಮಾಡಿದ್ದಾರೆ.
ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟದಿಂದ 9 ಜನ ಗಾಯಗೊಂಡಿದ್ದಾರೆ.
ಇದು ಸಹಜವಾಗಿಯೇ ಆತಂಕಕ್ಕೀಡು ಮಾಡಿದೆ.
ಸ್ಫೋಟದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು NIA ಹಾಗೂ IBಗೂ ಮಾಹಿತಿ ರವಾನಿಸಲಾಗಿದೆ.
ಪೊಲೀಸರು ಶೀಘ್ರದಲ್ಲೇ ಸ್ಫೋಟದ ಕಾರಣ ಕಂಡುಹಿಡಿಯಲಿದ್ದಾರೆ.…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 1, 2024