ತುಮಕೂರು : ರಾಮೇಶ್ವರ ಕೆಫೆಯಲ್ಲಿ ಇಂದು ಮಧ್ಯಾಹ್ನ ಬ್ಲಾಸ್ಟ್ ಆಗಿದೆ. ನಾನು ಕೂಡ ಸಂಜೆ ಅಥವಾ ನಾಳೆ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡ್ತೀನಿ ಎಂದು ಡಾ.ಜಿ. ಪರಮೇಶ್ವರ್ ಹೇಳಿದರು.
ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲಾಸ್ಟ್ ಯಾವ ರೀತಿ ಆಯ್ತು? ಹೇಗೆ ಮಾಡಿದ್ದಾರೆ? ಅಂತ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಮಿಷನರ್, ಡಿಜಿಯವರು ಜೊತೆಗೆ FSL ಬಾಂಬ್ ಸ್ಕ್ಯಾಡ್ ಕೂಡ ಸ್ಥಳಕ್ಕೆ ಹೋಗಿದೆ. ಸ್ಥಳದಲ್ಲಿ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಬಳಿಕ ಮೂಲ ತಿಳಿಯಬೇಕಿದೆ. ಘಟನೆಯಲ್ಲಿ 9 ಜನರಿಗೆ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಆಗಿಲ್ಲ ಎಂಬ ಮಾಹಿತಿ ಬಂದಿದೆ ಎಂದು ಹೇಳಿದರು.
ನಮ್ಮ ಇಲಾಖೆ ವರದಿ ಬರೋವರೆಗೂ ಏನು ಹೇಳಲ್ಲ
ಈಗ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡಿದ್ದಾರೆ, ಪರಿಶೀಲನೆ ಆಗ್ತಿದೆ. ಒಂದು ವೇಳೆ ಕುರುಹುಗಳು ಸಿಕ್ಕಲ್ಲಿ ಮುಂದಿನ ತನಿಖೆ ಮಾಡಲಾಗುತ್ತದೆ. ಹೇಳಿಕೆಗಳು ಬಂದಿವೆ ಅಷ್ಟೇ ಅವರಿವರು ಹೇಳುತ್ತಿದ್ದಾರೆ. ಐಇಡಿ ಅಂತ ಹೇಳ್ತಿದ್ದಾರೆ. ಆದರೆ, ಖಚಿತತೆ ಇಲ್ಲ. ಬ್ಯಾಗ್ ಇತ್ತು ಅಂತಿದ್ದಾರೆ. ನಿರ್ದಿಷ್ಟ ಮಾಹಿತಿ ಇನ್ನೂ ಬರಬೇಕಿದೆ. ನಿರ್ದಿಷ್ಟ ಮಾಹಿತಿ ನಮ್ಮ ಇಲಾಖೆಯಿಂದ ಬರಬೇಕಿದೆ. ಇಂತಹ ವಿಚಾರದಲ್ಲಿ ಸ್ಪೆಕ್ಯೂಲೆಟ್ ಮಾಡುವುದು ಸರಿಯಲ್ಲ. ನಮ್ಮ ಇಲಾಖೆ ವರದಿ ಬರೋವರೆಗೂ ನಾನು ಏನು ಹೇಳಲು ಆಗಲ್ಲ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು.