Saturday, May 11, 2024

ಬಸ್​ಗಳ ಕೊರತೆ ಇರುವುದು ನಿಜ : ರಾಮಲಿಂಗಾರೆಡ್ಡಿ

ರಾಮನಗರ : ಬಸ್ ಸಮಸ್ಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರದಾಟ ಹಾಗೂ ಕಾಂಗ್ರೆಸ್ ಸಮಾವೇಶಕ್ಕೆ ಕೆಎಸ್ಆರ್​ಟಿಸಿ ಬಸ್ ನಿಯೋಜನೆಯಿಂದ ತೊಂದರೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್​ಗಳ ಕೊರತೆ ಇರುವುದು ನಿಜ ಎಂದು ಹೇಳಿದ್ದಾರೆ.

ಸಮಾವೇಶಗಳು ಆಗಬೇಕು, ವಿದ್ಯಾರ್ಥಿಗಳ ಪರೀಕ್ಷೆಯೂ ಆಗಬೇಕು. ಈಗಾಗಲೇ ರಾಮನಗರ ಜಿಲ್ಲೆಗೆ 25 ಹೊಸ ಬಸ್​ಗಳನ್ನು ನೀಡಿದ್ದೇವೆ. ಇನ್ನೂ 75 ಬಸ್​ಗಳನ್ನು ಶೀಘ್ರದಲ್ಲೇ ಕೊಡುತ್ತೇವೆ. ಸದ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ನಾಸೀರ್ ಬೆಂಬಲಿಗರು ಘೋಷಣೆ ಕೂಗಿದ್ರಾ?

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ ತನಿಖೆ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ಸರ್ಕಾರ ತನಿಖೆ ಮಾಡುತ್ತಿದೆ. ಯಾರೇ ತಪ್ಪು‌ಮಾಡಿದ್ರೂ ಕ್ರಮ ಆಗಲೇಬೇಕು. ಅಲ್ಲಿ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು ಘೋಷಣೆ ಕೂಗಿದ್ದಾರಾ? ಅಥವಾ ಹೊರಗಡೆಯಿಂದ ಬಂದು ಘೋಷಣೆ ಕೂಗಿದ್ದಾರಾ? ಗೊತ್ತಿಲ್ಲ. ತನಿಖೆ ಬಳಿಕ ಎಲ್ಲವೂ ಬಹಿರಂಗವಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES