Sunday, April 28, 2024

ರಾಮೇಶ್ವರಂ ಕೆಫೆ ಸ್ಪೋಟ ಸಂಬಂಧ ಇಂದು ಸಿಎಂ ಸಭೆ

ಬೆಂಗಳೂರು: ನಗರದಲ್ಲಿ ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ ಹಿನ್ನಲೆ ಇಂದು ಮಧ್ಯಾಹ್ನ 1 ಗಂಟೆಗೆ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ, ಬಾಂಬ್ ಬ್ಲ್ಯಾಸ್ಟ್ ಪ್ರಕರಣದ ತನಿಖೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆರೋಪಗಳನ್ನು ಪತ್ತೆ ಹಚ್ಚಲು ಕಾರ್ಯತಂತ್ರ ಮಾಡಿದ್ದಾರೆ. ಪ್ರಕರಣವನ್ನು ಉನ್ನತ ತನಿಖೆಗೆ ಕೊಡುವ ವಿಚಾರದ ಕುರಿತಂತೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: Rameshwaram Cafe Blast : ಓರ್ವ ಶಂಕಿತನ ವಶಕ್ಕೆ ಪಡೆದ ಪೊಲೀಸರು!

ಇನ್ನು ಈ ಸಭೆಯಲ್ಲಿ ರಾಜ್ಯ ಗೃಹಸಚಿವ ಜಿ‌‌.ಪರಮೇಶ್ವರ, ಗೃಹ ಇಲಾಖೆಯ ಕಾರ್ಯದರ್ಶಿ, ಡಿಜಿ, ಐಜಿಪಿ ಸೇರಿ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಶಂಕಿತ ಪೊಲೀಸ್​ ವಶಕ್ಕೆ:

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ, ವಶಕ್ಕೆ ಪಡೆದ ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದು ವಿಚಾರಣೆ ಮುಂದುವರೆಸಿದ್ದಾರೆ.

RELATED ARTICLES

Related Articles

TRENDING ARTICLES