Tuesday, April 30, 2024

ನಾವು ಎಂದಿಗೂ ಸೀತಾರಾಮನ ಸಂಸ್ಕೃತಿಯವರು, ರಾಮನನ್ನು ಒಂಟಿ ಮಾಡಲ್ಲ : ಬಿಜೆಪಿಗರಿಗೆ ಸಿದ್ದರಾಮಯ್ಯ ಟಾಂಗ್

ಕೊಪ್ಪಳ : ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಟಾಂಗ್ ಕೊಟ್ಟರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದು ಹೇಳಿದರು.

ಸರ್ವೋದಯ, ಸರ್ವಧರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ ಎಂದು ತಿಳಿಸಿದರು.

ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ

ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ಹೇಳಿದರು.‌

ನಾವು ಅಂಬೇಡ್ಕರ್ ವಿಚಾರ ಪಾಲಿಸುತ್ತೇವೆ

ನಾವು ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ ಎಂದು ಸಿದ್ದರಾಮಯ್ಯ ತಿಳಿಸಿದರು.

RELATED ARTICLES

Related Articles

TRENDING ARTICLES