Friday, May 17, 2024

Rameshwaram Cafe Blast : ಓರ್ವ ಶಂಕಿತನ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ನಗರವನ್ನೇ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ ತರಲಿದ್ದಾನೆ ಶನಿ

ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಶಂಕೆ ಮೇರೆಗೆ ವಿಚಾರಣೆಗೊಳಪಡಿಸಲಾಗಿದ್ದವರ ಪೈಕಿ ಓರ್ವ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಟೋಪಿ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.

RELATED ARTICLES

Related Articles

TRENDING ARTICLES